Saturday, March 15, 2008

ರಾಜ್ಯರಾಜಕೀಯದ 'ತ್ರಿಶಂಕು ಸ್ಥಿತಿ'


ಬೆಂಗಳೂರು: ಮೇ ತಿಂಗಳಿನಲ್ಲಿ ಚುನಾವಣೆ ನಡೆಯುವುದು ಖಚಿತವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಾಜಕಾರಣದಲ್ಲೀಗ ಬಿರುಸಿನ ಚಟುವಟಿಕೆ ನಡೆಯತೊಡಗಿದೆ. ಎಲ್ಲವೂ ಸರಿಯಾಗಿದೆ ಎಂಬಷ್ಠರಲ್ಲಿ ಯೇ ಕಾಂಗ್ರೆಸ್ ಹೈಕಮಾಂಡ್ ಮಹಾರಾಷ್ಟ್ರ ರಾಜ್ಯಪಾಲರಾಗಿದ್ದ ಎಸ್.ಎಂ.ಕೃಷ್ಣ ಅವರನ್ನು ರಾಜ್ಯ ರಾಜಕಾರಣದ ಪಡಸಾಲೆಗೆ ಎಳೆದುತಂದಿದೆ.

ಕೃಷ್ಣ ಅವರು ರಾಜ್ಯ ರಾಜಕೀಯ ಆಗಮಿಸುತ್ತಾರೆ ಎಂಬ ಸುದ್ದಿ ಹಬ್ಬುತ್ತಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅಸಮಾಧಾನ ವ್ಯಕ್ತಪಡಿಸಿದ್ದರು. ಡಿ.ಕೆ.ಶಿವಕುಮಾರ್ ಗುಂಪಿಗೆ ಕೃಷ್ಣರ ಆಗಮನ ಮಹತ್ವದೆನಿಸಿದ್ದರೂ ಕೂಡ ಕಾಂಗ್ರೆಸ್‌‌ನ ಬಹುತೇಕ ಮುಖಂಡರಿಗೆ ಒಳಗೊಳಗೆ ಅಸಮಾಧಾನ ಹೊಗೆಯಾಡುತ್ತಿದೆ. ಅದರ ಪರಿಣಾಮ ಎಂಬಂತೆ ಮೈಸೂರಿನಲ್ಲಿ ಖರ್ಗೆ ನೇತೃತ್ವದಲ್ಲಿ ನಡೆಯಲಿರುವ ರಾಜ್ಯದ ಉದ್ದಗಲಕ್ಕೂ ಜನಜಾಗೃತಿ ಮೂಡಿಸಲು ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆದರೆ ಎಸ್.ಎಂ.ಕೃಷ್ಣ ಅವರನ್ನು ಆಹ್ವಾನಿಸದೆ ಆಮಂತ್ರಣ ಪತ್ರದಿಂದ ಅವರ ಹೆಸರನ್ನು ಕೈ ಬಿಡಲಾಗಿದೆ. ಇದರಿಂದ ಕಾಂಗ್ರೆಸ್ ಗುಂಪುಗಾರಿಕೆ ಮತ್ತೊಮ್ಮೆ ಬಯಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ರಾಹುಲ್ ಗಾಂಧಿಯನ್ನು ಹೆಚ್ಚಾಗಿ ಪ್ರಚಾರಕ್ಕೆ ಬಳಸಿಕೊಳ್ಳತೊಡಗಿದೆ. ಅದರ ಫಲಿತಾಂಶ ಎಂಬಂತೆ ಗುಜರಾತ್, ಹಿಮಾಚಲ ಪ್ರದೇಶಗಳಲ್ಲಿ ರಾಹುಲ್ ರೋಡ್ ಶೋ ಯಾವುದೇ ಫಲ ಕೊಟ್ಟಿಲ್ಲ.

ಆದರೂ ಒರಿಸ್ಸಾದಿಂದ ಡಿಸ್ಕವರ್ ಇಂಡಿಯಾ ಪ್ರವಾಸ ಆರಂಭಿಸಿರುವ ರಾಹುಲ್ ಕರ್ನಾಟಕಕ್ಕೂ ಆಗಮಿಸು ತ್ತಿದ್ದಾರೆ. ಆದರೆ ಜನರು ರಾಹುಲ್‌‌ಗೆ ಹೆಚ್ಚಿನ ಮಹತ್ವ ನೀಡುವುದು ಅನುಮಾನವೇ, ಇಂದಿರಾ, ರಾಜೀವ್‌‌ಗಾಂಧಿ ರೋಡ್ ಶೋಗಳಿಗೆ ಜನ ಮುಗಿ ಬೀಳುತ್ತಿದ್ದರು, ಹಾಗೂ ನಿಮ್ಮದು ಯಾವುದಕ್ಕೆ ಮತ ಅಂತ ಕೇಳಿದರೆ 'ಕೈ'ಎನ್ನುತ್ತಿದ್ದರು.

ಆದರೆ ಈಗ ಪರಿಸ್ಥಿತಿ ಬದಲಾಗಿದೆ!! ಕಾಂಗ್ರೆಸ್ ಪಕ್ಷಕ್ಕೆ ಸಿದ್ಧರಾಮಯ್ಯ, ಎಂ.ಪಿ.ಪ್ರಕಾಶ್‌‌ರಂತಹ ಘಟಾನುಘ ಟಿಗಳು ಸೇರ್ಪಡೆಗೊಳ್ಳುವ ಮೂಲಕ ಕಾಂಗ್ರೆಸ್ ಬಲಶಾಲಿಯಾಗಿದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡು ಬಂದರೂ ಕೂಡ, ರಾಜ್ಯ ರಾಜಕಾರಣದಲ್ಲಿನ ಸೂಕ್ಷ್ಯ ಎಳೆಗಳನ್ನು ಅವಲೋಕಿಸುತ್ತ ಹೋದರೆ, ಕಾಂಗ್ರೆಸ್‌‌ನಲ್ಲಿ ಒಗ್ಗಟ್ಟು ಇಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಅಲ್ಲದೇ ಕ್ಷೇತ್ರ ಪುನರ್ವಿಂಗಡಣೆಗೆ ಕೇಂದ್ರ ಅಸ್ತು ಎಂದ ಮೇಲೆ ಕೆಲವು ಮುಖಂಡರಿಗೆ ದಿಕ್ಕೇ ತೋಚದಂತಾ ಗಿದೆ. ಈ ಸ್ಥಿತಿ ಕೇವಲ ಕಾಂಗ್ರೆಸ್‌‌ಗೆ ಮಾತ್ರವಲ್ಲ,ಬಹುತೇಕ ಪಕ್ಷದಲ್ಲಿನ ಮುಖಂಡರು ಹಲವು ವರ್ಷಗಳ ಕಾಲ ಒಂದೇ ಕ್ಷೇತ್ರದಲ್ಲಿ ಪಾಳೆಗಾರರಂತೆ ಸ್ಪರ್ಧಿಸಿ ಗೆಲ್ಲುತ್ತಿದ್ದರು. ಆ ಅವಕಾಶ ಈ ಬಾರಿ ಕೈ ತಪ್ಪಿ ಹೋಗುವ ಮೂಲಕ ಅವರ ಅಸ್ತಿತ್ವಕ್ಕೆ ಕೊಡಲಿಯೇಟು ಬಿದ್ದಂತಾಗಿರುವುದರಿಂದ ಈ ಬಾರಿಯ ಚುನಾವಣೆ ಅಖಾಡ ಮತ್ತಷ್ಟು ರಂಗೇರಲಿದೆ.

ಇನ್ನು ಭಾರತೀಯ ಜನತಾ ಪಕ್ಷ ಅನುಕಂಪ, ಹಿಂದುತ್ವದ ಅಜೆಂಡಾದ ಮೇಲೆ ಮುನ್ನುಗ್ಗಲು ಪ್ರಯತ್ನಿಸಿದರೂ ಕೂಡ ಯಾವುದೇ ಫಲ ನೀಡದ ಕಾರಣ ಇದೀಗ ಬಿಜೆಪಿ ತನ್ನ ವರಸೆಯನ್ನು ಬದಲಾಯಿಸಿ, ಗಲಭೆ, ದತ್ತ ಪೀಠಗಳೆಲ್ಲವನ್ನು ಬದಿಗೊತ್ತಿ-ರೈತಪರ, ಶಾಸ್ತ್ರೀಯ ಸ್ಥಾನಮಾನ, ಭ್ರಷ್ಠಾಚಾರ ಅಜೆಂಡಾವನ್ನು ಮುಂದಿಟ್ಟು ಚುನಾವಣಾ ಅಖಾಡಕ್ಕೆ ಇಳಿಯಲು ಸಿದ್ಧವಾಗಿದೆ.

ಜೆಡಿಎಸ್ ಕಾಂಗ್ರೆಸ್-ಬಿಜೆಪಿಯನ್ನು ಸಮಾನ ಶತ್ರುಗಳೆಂದು ದೂರ ಸರಿದಿದ್ದು (ಕೆಟ್ಟ ಮೇಲೆ ಬುದ್ಧ ಬಂತು ಎಂಬ ಗಾದಿ ಮಾತಿನಂತೆ)ತಮ್ಮ ಸರಕಾರದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟು ಮತದಾರರ ಬಳಿ ಹೋಗುವುದಾಗಿ ಹೇಳಿದೆ. ಇನ್ನು ಬಿಎಸ್ಪಿ, ಸಮಾಜವಾದಿ,ಸಿಪಿಐಎಂ ಮುಂತಾದವುಗಳು ಕಣದಲ್ಲಿವೆ.

ಒಟ್ಟಿನಲ್ಲಿ ರಾಷ್ಟ್ರೀಯ ಪಕ್ಷವಾಗಲಿ,ಪ್ರಾದೇಶಿಕ ಪಕ್ಷದಲ್ಲಾಗಲಿ ಹೇಳಿಕೊಳ್ಳುವಂತಹ ಒಬ್ಬನೇ ಒಬ್ಬ ಡೈನಾಮಿಕ್ ರಾಜಕಾರಣಿ ಇದ್ದಾರೆಯೇ ಎಂಬುದು ಮತದಾರರ ಮುಂದಿರುವ ಪ್ರಶ್ನೆ. ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾ ವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಆದರೆ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಈ ಬಾರಿಯೂ ಯಾವ ಪಕ್ಷಕ್ಕೂ ಬಹುಮತ ದೊರೆಯಲಾರದು ಎಂಬ ಅಂಶ ನಿಚ್ಚಳವಾಗತೊಡಗಿದೆ....

ಕ್ಷೇತ್ರ ಪುನರ್ವಿಂಗಡಣೆಗೆ ಕೇಂದ್ರ ಸಚಿವ ಸಂಪುಟ ಅನಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕ್ಷೇತ್ರಗಳನ್ನು ಕಳೆದುಕೊಳ್ಳಲಿರುವವರಲ್ಲಿ ಪ್ರಮುಖರಾಗಿ, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(ಗುರುಮಿಠಕಲ್), ಎಂ.ಪಿ.ಪ್ರಕಾಶ್(ಹೂವಿನ ಹಡಗಲಿ), ಡಿ.ಕೆ.ಶಿವಕುಮಾರ್ (ಸಾತನೂರು), ಟಿ.ಬಿ.ಜಯಚಂದ್ರ (ಕಳ್ಳಂಬೆಳ್ಳ), ಡಾ.ಜಿ.ಪರಮೇಶ್ವರ(ಮಧುಗಿರಿ), ಎನ್.ಎಸ್. ಬೋಸರಾಜು (ಮಾನ್ವಿ),

ಗುರುಪಾದಪ್ಪ ನಾಗಮಾರಪಲ್ಲಿ (ಔರಾದ್), ಕೃಷ್ಣಬೈರೇಗೌಡ (ವೇಮಗಲ್). ಸಿ.ಚನ್ನಿಗಪ್ಪ (ಕೊರಟಗೇರಿ), ಡಿ.ಮಂಜುನಾಥ್ (ಹಿರಿಯೂರು), ಅಲಂಗೂರು ಶ್ರೀನಿವಾಸ್(ಮುಳಬಾಗಿಲು), ಕೆ.ಎನ್.ರಾಜಣ್ಣ (ಬೆ ಳ್ಳಾವಿ), ನಾಗರಾಜಯ್ಯ (ಹುಲಿಯೂರುದುರ್ಗ), ಸಂತೋಷ್ ಲಾಡ್ (ಸಂಡೂರು), ಅಮರೇಗೌಡ ಬಯ್ಯಾಪುರ (ಲಿಂಗಸೂರು), ವೈಜನಾಥ್ ಪಾಟೀಲ್(ಚಿಂಚೋಳಿ).

ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ (ಮಾಯಾಕೊಂಡ), ಪಕ್ಷೇತರ ಶಾಸಕರಾಗಿದ್ದ ಕೆ.ಜಯಪ್ರಕಾಶ್ ಹೆಗ್ಡೆ (ಬ್ರಹ್ಮಾವರ), ಎಚ್. ಆಂಜನೇಯ (ಭರಮಸಾಗರ), ನಾಗಮಣಿ ನಾಗೇಗೌಡ ಕಿರಗಾವಲ). ಅಲ್ಲದೇ, ದಾವಣಗೆರೆ, ರಾಯಚೂರು, ಬಳ್ಳಾರಿಯಲ್ಲಿ ತಲಾ ಒಂದೊಂದು ವಿಧಾನಸಭಾ ಕ್ಷೇತ್ರಗಳು ಜಾಸ್ತಿಯಾಗಲಿದ್ದು, ಮಂಗಳೂರು, ಚಿಕ್ಕಮಗಳೂರು, ಉಡುಪಿ, ಮಂಡ್ಯ, ಕೋಲಾರ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಮಡಿಕೇರಿ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಹಾಗೂ ತುಮಕೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳು ಕಡಿಮೆ ಆಗಲಿದೆ.


6 comments:

ಕಿರಣ್ ಜಯಂತ್ said...
This comment has been removed by the author.
ಕಿರಣ್ ಜಯಂತ್ said...

Ee lekhana odi thaavu eshtu "Bahumukhi" endu tiLiyalu hecchu samaya bekaagalilla. Karnataka Rajyada "Political Crisis" bagge ondu olleya lekhana barediddiri. Rajakeeyavendare atheeva aaskati hondiruva naanu prathi dina neevu barediruvanthaha "Rajakeeya vishleshaNe" ge sadaa hudukuttiruttene.

ಕಿರಣ್ ಜಯಂತ್ said...

Nimma lekhanadinda spoorthi paDedu naa ee lekhana barediruve -

dayavittu tamma amoolya anisike vyaktapaDisi

ಚುರ್ ಮುರಿ - http://kiranjayanth.blogspot.com/

Nagendra Trasi said...

ಹಾಯ್ ಕಿರಣ್

ಟೆಕ್ಸಾಸ್‌‌ನಿಂದ ಮುಕ್ತವಾಗಿ ಪ್ರತಿಕ್ರಿಯಿಸಿದ್ದಕ್ಕೆ ಹಾಗೂ ರಾಜ್ಯ ರಾಜಕೀಯದೆಡೆಗೆ ಬೆರಗು ನೋಟ ಇಟ್ಟುಕೊಂಡು ಬಹುಮುಖಿ ಜಾಲದೊಳಗೆ ಇಣುಕಿ ಅಭಿಪ್ರಾಯ ಹಂಚಿಕೊಂಡಿದ್ದಕ್ಕೆ ನಾನು ಋಣಿ.

ನಾಗೇಂದ್ರ ತ್ರಾಸಿ.

ಕಿರಣ್ ಜಯಂತ್ said...
This comment has been removed by the author.
ಕಿರಣ್ ಜಯಂತ್ said...

ನಮಸ್ಕಾರ ನಾಗೇಂದ್ರ ತ್ರಾಸಿರವರೆ,

ನಿಮ್ಮ ಅನಿಸಿಕೆ-ಅಭಿಮತಕ್ಕೆ ನಾನೂ ಸಹ ಋಣಿ. ಹೌದು, ಇರುವುದು ಟೆಕ್ಸಾಸ್ ಆದರೂ ಮನಸ್ಸೆಲ್ಲಾ ಬೆಂಗಳುರಿನ ಆಗು-ಹೋಗುಗಳ ಮೇಲೆಯೇ ಇರುತ್ತೆ ನೋಡಿ :)

ರಾಜಕೀಯದ ಮೇಲಿನ ನಿಮ್ಮ ವಿಶ್ಲೇಷಣೆ ಪ್ರಶಂಸನಾರ್ಹ. ಬರೀತಾ ಇರಿ ಸರ್.