Tuesday, March 4, 2008

ಮಹಿಳೆಯರು ಎಷ್ಟು ಸುರಕ್ಷಿತ.... ?!



ಹೆಣ್ಣಿಗೆ ಭಾರತೀಯ ಸಮಾಜದಲ್ಲಿ ಅದೆಷ್ಟು ಗೌರವ, ಪೂಜನೀಯ ಸ್ಥಾನ, ಆಕೆ ಪ್ರೀತಿಯ ತಾಯಿ, ಅಕ್ಕ, ತಂಗಿ, ಪ್ರಿಯೆ, ಪ್ರಿಯತಮೆ ಹೀಗೆ ಎಲ್ಲ ಸ್ಥಾನವನ್ನೂ ಅಲಂಕರಿಸುತ್ತಾಳೆ. ಆದರೆ ಪುರುಷ ಪ್ರಧಾನ (!!) ವ್ಯವಸ್ಥೆಯಲ್ಲಿ ಇಂದಿಗೂ ಹೆಣ್ಣು ಅನುಭವಿಸುತ್ತಿರುವ ಯಾತನೆ, ನೋವುಗಳಿಗೆ ಪರಿಹಾರ ಸಿಕ್ಕಿದೆಯೇ ಎಂಬ ಬಗ್ಗೆ ಮಹಿಳಾ ದಿನಾಚರಣೆ (ಮಾ.8) ಅಂಗವಾಗಿ ಒಂದು ಬರಹ ಇಲ್ಲಿದೆ...

ಹೆಣ್ಣು ನಾಲ್ಕು ಗೋಡೆ ಮಧ್ಯೆಯೇ ವಾಸಿಸಬೇಕಾದವಳಲ್ಲ, ಆಕೆಗೂ ಸ್ವಾತಂತ್ರ್ಯ, ಹಕ್ಕು, ಸ್ಥಾನಮಾನದ ಅಗತ್ಯ ಇದೆ ಎಂಬಂತಹ ಮಾತುಗಳು ಬಹಳ ಹಿಂದಕ್ಕೆ ಹೋಗಿವೆ. ಅಂತಹ ವಾತಾವರಣ ಬಹಳಷ್ಟು ಕಡಿಮೆಯಾಗಿದೆ. ಇಂದು ಮಹಿಳೆಯರು ನಾಲ್ಕು ಗೋಡೆಯನ್ನು ಯಶಸ್ವಿಯಾಗಿ ದಾಟಿ ಮುಖ್ಯವಾಹಿನಿಗೆ ಬಂದಿದ್ದಾರೆ. ಸ್ವಾತಂತ್ರ್ಯ, ಹಕ್ಕು ಎಲ್ಲವೂ ದೊರೆತಿದೆ ಎಂಬಂತಹ ನಿಟ್ಟುಸಿರುವ ಬಿಡುವ ವಾತಾವರಣ ಭಾರತದಲ್ಲಿ (ಸ್ಥಳೀಯವಾಗಿಯಾಗಲಿ) ಸೃಷ್ಟಿಯಾಗಿದೆಯೇ ಎಂಬುದನ್ನು ವಿಶ್ಲೇಷಿಸಬೇಕಾಗಿದೆ.

ಇಂದು ಸ್ವಾತಂತ್ರ್ಯ, ಹಕ್ಕುಗಳಿಗಿಂತ ಮಹಿಳೆಯರ ಪಾಲಿಗೆ ಬೇರೆಯದೆ ತೆರನಾದ ಸಮಸ್ಯೆಗಳು ಆವರಿಸಿಕೊಂಡು ಬಿಟ್ಟಿದೆ ಎನ್ನು ವುದಕ್ಕೆ ನಾಗರಿಕ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳನ್ನೇ ಗಮನಿಸಿದರೆ ಸಾಕು, ಹೆಚ್ಚಿಗೆ ಏನು ಹೇಳಬೇಕಾದ ಅವಶ್ಯಕತೆ ಇಲ್ಲ..

ಘಟನೆ 1 : ನನ್ನ ಮೇಲೆ ಆಸಿಡ್ ದಾಳಿ ನಡೆಸಿದ ಪತಿ ಈಗ ನನ್ನ ಕಣ್ಣ ಮುಂದೆಯೇ ಆರಾಮವಾಗಿದ್ದಾನೆ. ಅವನ ವಿಕೃತಿಗೆ ನನ್ನ ಬದುಕೇ ಬಲಿಯಾಯಿತು. ಆ ಬಗ್ಗೆ ಆತನಿಗೆ ಯಾವುದೇ ಅಳುಕಿಲ್ಲ. ಈ ಘಟನೆ ನಂತರ ನನಗೆ ಯಾರು ಮನೆಯನ್ನು ಬಾಡಿಗೆಗೆ ನೀಡಲಿಲ್ಲ. ಹತ್ತಾರು ಮನೆಗಳ ಬಾಗಿಲು ಬಡಿದರೂ ಮನೆ ಸಿಗಲಿಲ್ಲ, ನನಗೆ ಮನೆ ನೀಡದಿರಲು ಕಾರಣವಾದರೂ ಏನು ಎಂದು ಅಲವತ್ತುಕೊಂಡಾಕೆ ಗಂಡನ ಆಸಿಡ್ ದಾಳಿಗೆ ತುತ್ತಾದ ನತದೃಷ್ಟೆ ಶಾಂತಿ. ನನ್ನ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಿಗಳಿಗೆ ಒಂಬತ್ತು ವರ್ಷ ಕಳೆದರೂ ಶಿಕ್ಷೆಯಾಗಿಲ್ಲ ಎಂದು ಕಣ್ಣೀರು ಸುರಿಸಿದಾಕೆ ಹಸೀನಾ.


ಇವರೆಲ್ಲ ಇತ್ತೀಚೆಗೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ವತಿಯಿಂದ ನಡೆದ ಆಸಿಡ್ ದಾಳಿ ರಾಷ್ಟ್ರೀಯ ವಿಚಾರಣ ಸಂಕಿರಣದಲ್ಲಿ ಭಾಗವಹಿಸಿ ವಿಕೃತ ಪುರುಷನ ಕ್ರೌರ್ಯಕ್ಕೆ ಬಲಿಯಾದ ನೋವಿನ ಘಟನೆಯ ಸುರುಳಿಯನ್ನು ಬಿಚ್ಚಿಟ್ಟಿದ್ದರು.


ಘಟನೆ 2: ಒಬ್ಬಂಟಿ ಆದಿವಾಸಿ ಮಹಿಳೆಯನ್ನು ಅಸ್ಸಾಂನ ಗುವಾಹಟಿಯಲ್ಲಿ ಹಾಡಹಗಲೇ ಎಲ್ಲರೆದುರಲ್ಲೇ ಬೆತ್ತಲೆಗೊಳಿಸಿ ಅಟ್ಟಾಡಿ ಸುತ್ತಿರುವ ಪುರುಷನ ಅಮಾನವೀಯ ಕ್ರೌರ್ಯದ ದೃಶ್ಯವನ್ನು ಸಿಎನ್‌‌ಎನ್ ಹಾಗೂ ಟೈಮ್ಸ್ ಮಾಧ್ಯಮಗಳು ಪದೇ, ಪದೇ ತೋರಿಸು ತ್ತಿದ್ದವು. ಒಬ್ಬ ಮಹಿಳೆಯನ್ನು ಸಾರ್ವಜನಿಕವಾಗಿ ಬೆತ್ತಲೆಗೊಳಿಸಿ ಆಕೆಯನ್ನು ಗೋಳುಹೊಯ್ದುಕೊಳ್ಳುವುದು ಇದು ನಾಗರಿಕ ಸಮಾಜದ ಲಕ್ಷಣಗಳಾ ??,


ಬಳಿಕ ಆಯೋಗ, ದೂರು-ದುಮ್ಮಾನಗಳು ಅಂತ ಗಮನಸೆಳೆದಾಗ ಮುಖ್ಯಮಂತ್ರಿಗಳು ಆಕೆಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಆರೋಪಿಗಳನ್ನು ಬಂಧಿಸಿದರು.ಮಾನ ಎಲ್ಲರಿಗೂ ಒಂದೇ, ಆಕೆಯ ದಯನೀಯ ಸ್ಥಿತಿಯನ್ನು ಕೋಟ್ಯಂತರ ಮಂದಿ ವೀಕ್ಷಿಸಿದ್ದರು. ಹಾಗೆ ಹೋದ ಮಾನ ಪರಿಹಾರ ಕೊಟ್ಟರೆ ಮತ್ತೆ ವಾಪಸು ಬರುತ್ತದೆಯಾ... ಯಾವ ಪರಿಹಾರ ಆಕೆಯ ಮಾನಸಿಕ ನೋವು, ಯಾತನೆಗಳನ್ನು ನೀಗಿಸುತ್ತದೆ..


ಅದರಂತೆಯೇ ಹೊಸ ವರ್ಷದ ಅಮಲಿನಲ್ಲಿ ಮುಂಬೈಯಲ್ಲಿ ಪಡ್ಡೆಗಳು ನಡೆಸಿದ ಮಹಿಳೆಯರ ಮೇಲಿನ ಚುಡಾಯಿಸುವ ಘಟನೆ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಯಿತು. ಗೋವಾ ಕಡಸ ಕಿನಾರೆಯಲ್ಲೂ ಅದೇ ತೆರನಾದ ಘಟನೆ ನಡೆಯಿತು. ವಿದೇ ಶಿ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಯಿತು. ಹೀಗೆ ಸಾಲು,ಸಾಲಾಗಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅಮಾನವೀಯ ಕೃತ್ಯಕ್ಕೆ ಸರಿಯಾದ ಕಾನೂನಾದರೂ ಬಂದಿದೆಯಾ.


ವರದಕ್ಷಿಣೆ ಹಿಂಸೆಗೆ ಬಲಿಯಾಗುವವರ ಸಂಖ್ಯೆ ಇಂದಿಗೂ ಮುಂದುವರಿದಿದೆ.ಭಾರತದಲ್ಲಿ ನಡೆಯುತ್ತಿರುವ ಆಸಿಡ್ ದಾಳಿ ಪ್ರಕರಣ ಗಳಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ. ಈವರೆಗೆ 58 ಪ್ರಕರಣಗಳು ನಡೆದಿವೆ. ಹೀಗೆ ಪುರುಷನ ವಿಕೃತಿಯ ದಾಳಿಗೆ ಸಿಲುಕಿದವರಲ್ಲಿ ಮೂರು ಮಂದಿ ಸಾವನ್ನಪ್ಪಿದ್ದಾರೆ. ಆಸಿಡ್ ದಾಳಿಯಿಂದ ಬದುಕುಳಿದ ಯುವತಿಯರು, ಮಹಿಳೆಯರು ನರಕಯಾತನೆ ಅನುಭವಿಸುತ್ತಿದ್ದಾರೆ.


ಇದೀಗ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗ (ರಾತ್ರಿ ಪಾಳಿ ಮಹಿಳಾ ಉದ್ಯೋಗಿಗಳಿಗೆ ರಕ್ಷಣೆ ನೀಡುವ ಬಗ್ಗೆ) ಐಟಿ-ಬಿಟಿ, ಕಾಲ್ ಸೆಂಟರ್, ಬಿಪಿಒಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರ ಕುರಿತು ವಿಶೇಷ ಕಾನೂನು ಜಾರಿಗೆ ತರಲು ಆಗ್ರಹಿಸುವುದಾಗಿ ಹೇಳಿದೆ. ಆದರೆ ಇತ್ತೀಚೆಗಷ್ಟೇ ಬಿಪಿಒ ಉದ್ಯೋಗಿ ಪ್ರತಿಭಾ ಹತ್ಯೆ ಕುರಿತು ಸರ್ವೊಚ್ಛನ್ಯಾಯಾಲಯ, ಮಹಿಳಾ ಸಿಬ್ಬಂದಿಯ ರಕ್ಷಣೆ ಕುರಿತು ಹೊಣೆಯನ್ನು ಕಂಪೆನಿ ಅಥವಾ ಸಾರಿಗೆ ಸೌಲಭ್ಯವನ್ನು ಒದಗಿಸುವ ಸಂಸ್ಥೆ ಹೊರಬೇಕೆ ಎಂಬುದಾಗಿ ಪ್ರಶ್ನಿಸಿತ್ತು. ( ಈ ಬಗ್ಗೆ ಸ್ಪಷ್ಟ ನಿಲುವು ನೀಡುವಂತೆ ಸುಪ್ರೀಂಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಆಯೋಗ ಹೇಳಿದೆ) ಹಾಗಾದರೆ ಮಹಿಳೆಯರ ಬದುಕಿಗೆ ರಕ್ಷಣೆ ನೀಡುವವರು ಯಾರು...,


2 comments:

Sushrutha Dodderi said...

ಪ್ರಿಯರೇ,

ನಮಸ್ಕಾರ. ಹೇಗಿದ್ದೀರಿ?

ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!

ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ 'ಪ್ರಣತಿ', ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, 'ದಟ್ಸ್ ಕನ್ನಡ'ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, 'ಸಂಪದ'ದ ಹರಿಪ್ರಸಾದ್ ನಾಡಿಗ್, 'ಕೆಂಡಸಂಪಿಗೆ'ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, 'ಪ್ರಣತಿ'ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ,
ಇಂತಿ,

ಸುಶ್ರುತ ದೊಡ್ಡೇರಿ

ರಾಧಾಕೃಷ್ಣ ಆನೆಗುಂಡಿ. said...

ಬನ್ನಿ, ಭೇಟಿಯಾಗೋಣ.
ಮತ್ತೊಂದು ಕನಸು ನನಸಾಗಲು ಹೊರಟಿದೆ. ಬಹುದಿನಗಳಿಂದ ಅಂದುಕೊಂಡಿದ್ದು.

ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ! ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ 'ಪ್ರಣತಿ', ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ.

ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ ಯು.ಬಿ. ಪವನಜ, 'ದಟ್ಸ್ ಕನ್ನಡ'ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, 'ಸಂಪದ'ದ ಹರಿಪ್ರಸಾದ್ ನಾಡಿಗ್, 'ಕೆಂಡಸಂಪಿಗೆ'ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, 'ಪ್ರಣತಿ'ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ.